ಸಂಘದ ಆಡಳಿತ ಮಂಡಳಿಯಲ್ಲಿ ವಕೀಲೆಯರ ಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಬೇಕು: ಸುಪ್ರೀಂಕೋರ್ಟ್ ನಿರ್ದೇಶನ
ಬೆಂಗಳೂರು ವಕೀಲರ ಸಂಘದ ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಮಹಿಳಾ ವಕೀಲ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ.2ರಂದು ನಿಗದಿಯಾಗಿದ್ದ ಸಂಘದ ಚುನಾವಣೆಯನ್ನು ರದ್ದುಪಡಿಸಲಾಗಿದೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 2025ರ ಜ.8ರಂದು ಪ್ರಕಟಿಸಿರುವ ಚುನಾವಣಾ ವೇಳಾಪಟ್ಟಿಯನ್ನು ಅಮಾನತುಗೊಳಿಸಲಾಗಿದ್ದು, ಮರು ಚುನಾವಣಾ ಪ್ರಕ್ರಿಯೆಯನ್ನು ತಿಳಿಸಲಾಗುವುದು ಎಂದು ಎಎಬಿ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಮತ್ತು ಮುಖ್ಯ ಚುನಾವಣಾಧಿಕಾರಿ ಕೆ.ಎನ್.ಫಣೀಂದ್ರ ಪ್ರಕಟಣೆ ಹೊರಡಿಸಿದ್ದಾರೆ.
ಖಜಾಂಚಿ ಹುದ್ದೆ ಮಹಿಳೆಗೆ ಮೀಸಲು: ಎಎಬಿ ಚುನಾ ವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.33ರಷ್ಟು ಮೀಸಲಾತಿ ನೀಡಲು ಆದೇಶಿಸಬೇಕು ಎಂದು ಕೋರಿ ವಕೀಲೆ ಎಚ್.ಸಿ.ಕವಿತಾ ಮತ್ತಿತರರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದರು. ಈ ಹಿನ್ನೆಯಲ್ಲಿ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ನೀಡಲು ಕೋರ್ಟ್ ಆದೇಶಿಸಿದೆ.