ಸುದ್ದಿ

ಇ-ಖಾತಾ ಮಾಡಿಕೊಡಲು ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ

Share It

ಮಂಡ್ಯ: ಇ-ಖಾತಾ ಮಾಡಿಕೊಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ದಯಾನಂದ್ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ ಅಶ್ವತ್ ಎಂಬುವವರು ಇ-ಖಾತಾ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಪಿಡಿಒ ದಯಾನಂದ್ ₹25 ಸಾವಿರ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಅಶ್ವತ್ಥ ಅವರು ₹13 ಸಾವಿರವನ್ನು ಆನ್‌ಲೈನ್‌ ಮೂಲಕ ಪಾವತಿಸಿದ್ದರು. ಉಳಿದ ₹12 ಸಾವಿರವನ್ನು ಆನಂತರ ಕೊಡುವುದಾಗಿ ತಿಳಿಸಿ, ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಎಸ್ಪಿ ಸುರೇಶ್‌ಬಾಬು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟ‌ರ್ ಜಯರತ್ನಾ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Share It

You cannot copy content of this page