ಸುದ್ದಿ

ನಕಲಿ ಫೋಟೊ ಬಳಸಿ ಅಪಪ್ರಚಾರ; ಪ್ರಶಾಂತ್ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ದೂರು

Share It

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್‌ ಪ್ರಶಾಂತ್‌ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ.

‘ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕಳಂಕ ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್ಬುಕ್ ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

”ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ’ ಪ್ರಶಾಂತ್ ಸಂಬರಗಿ ನಟಿಯರೂ ಸೇರಿದಂತೆ ಅನೇಕರಿಗೆ ಈ ರೀತಿ ತೊಂದರೆ ನೀಡಿದ್ದು, ಆತನಿಗೆ ಪಾಠ ಕಲಿಸಬೇಕು, ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗವೇಕು ಎಂಬ ಕಾರಣಕ್ಕೆ ದೂರು ನೀಡಿದ್ದೇನೆ’ ಎಂದು ನಟ ಪ್ರಕಾಶ್ ರಾಜ್ ತಿಳಿಸಿದರು.

ಕುಂಭಮೇಳದಲ್ಲಿನ ಪುಣ್ಯಸ್ನಾನದ ಬಗ್ಗೆ ಪ್ರಶ್ನಿಸಿದಾಗ ‘ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆ ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು’ ಎಂದು ಹೇಳಿದರು.


Share It

You cannot copy content of this page