ಸುದ್ದಿ

ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ; ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿದ ಗೌರ್ನರ್

Share It

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದ್ದ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅಂಕಿತ ಹಾಕದೆ ತಿರಸ್ಕರಿಸಿದ್ದಾರೆ.

ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಇದರ ಜೊತೆಗೆ 10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡವು ಹೆಚ್ಚಿನ ಶಿಕ್ಷೆಯ ಪ್ರಮಾಣವಾಗಿದೆ. ಎಂಬ ಅಂಶವನ್ನು ಒಳಗೊಂಡಂತೆ ರಾಜ್ಯಪಾಲರು ತಿರಸ್ಕಾರಕ್ಕೆ ಹಲವು ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಸಾಲ ಪಡೆಯುವವನ ಬಳಿ ಏನೂ ದಾಖಲೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಾ, ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು.

ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ, ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ಹೇಳುವ ಮೂಲಕ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ತಿರಸ್ಕರಿಸಿದ್ದಾರೆ.


Share It

You cannot copy content of this page