ಸುದ್ದಿ

ಸಾಹಿತಿ ಬರಗೂರು ರಾಮಚಂದ್ರಪ್ಪಗೆ ಡಾ.ರಾಜಕುಮಾರ್ ಪ್ರಶಸ್ತಿ

Share It

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2025ನೇ ಸಾಲಿನ ‘ವರನಟ ಡಾ.ರಾಜಕುಮಾರ್ ಪ್ರಶಸ್ತಿ’ಗೆ ಹಿರಿಯ ಸಾಹಿತಿ,ಚಿಂತಕ ಡಾ.ಬರಗೂರು ರಾಮಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ನಾಡು, ನುಡಿಗೆ ಅನನ್ಯ ಸೇವೆ ಸಲ್ಲಿಸುವ ಸಾಧಕರಿಗೆ ಪ್ರತಿವರ್ಷ ನೀಡುವ ಈ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ. ಏ.18ರಂದು ಸಂಜೆ 5 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ಡಾ.ಎಚ್.ಎಸ್.ರಾಘವೇಂದ್ರರಾವ್ ಪ್ರಶಸ್ತಿ ಪ್ರದಾನ ಮಾಡಲಿದಾರೆ. ನಿರ್ದೇಶಕ ಎಸ್.ವಿ.ರಾಜೇಂದ.ಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷರಾದ ಸಿ.ಕೆ ರಾಮೇಗೌಡ ತಿಳಿಸಿದ್ದಾರೆ


Share It

You cannot copy content of this page