ಸುದ್ದಿ

ಮನೆಗಳ ಧ್ವಂಸ ಕ್ರಮ ಅಮಾನವೀಯ: ಪ್ರತಿಯೊಬ್ಬರಿಗೂ ಸೂರು ಹೊಂದುವ ಹಕ್ಕಿದೆ: ಸುಪ್ರೀಂ

Share It

ನವದೆಹಲಿ: ಕೆಲವು ಮನೆಗಳನ್ನು ಧ್ವಂಸಗೊಳಿಸಿರುವ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಮನೆಗಳ ಮಾಲೀಕರಿಗೆ 6 ವಾರಗಳ ಒಳಗಾಗಿ ತಲಾ ₹10 ಲಕ್ಷ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.

ಪ್ರಯಾಗರಾಜ್‌ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕೆಲವು ಮನೆಗಳನ್ನು ಧ್ವಂಸಗೊಳಿಸಿರುವುದು ಅಮಾನವೀಯ ಹಾಗೂ ಕಾನೂನುಬಾಹಿರ. ಈ ಕ್ರಮ ನಮ್ಮ ಆತ್ಮಸಾಕ್ಷಿಯನ್ನೇ ಪ್ರಶ್ನಿಸುವಂತೆ ಮಾಡಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ವಕೀಲ ಜುನ್ನೀಕರ್‌ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್ ಹಾಗೂ ಇತರರು, ತಮ್ಮ ಮನೆಗಳನ್ನು ಪ್ರಯಾಗರಾಜ್‌ ಅಭಿವೃದ್ಧಿ ಪ್ರಾಧಿಕಾರ ಧ್ವಂಸಗೊಳಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ಉಜ್ವಲ್ ಭುಯಾನ್‌ ಅವರು ಇದ್ದ ನ್ಯಾಯಪೀಠ, ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.

ದೇಶದಲ್ಲಿ ಕಾನೂನು ಪ್ರಕಾರವೇ ಎಲ್ಲ ನಡೆಯಬೇಕು. ಪ್ರತಿಯೊಬ್ಬರಿಗೂ ಸೂರು ಹೊಂದುವ ಹಕ್ಕು ಇದೆ. ಆದರೆ, ಮನೆಗಳನ್ನು ಈ ರೀತಿ ನೆಲಸಮಗೊಳಿಸಬಾರದು. ಮನೆಗಳನ್ನು ಧ್ವಂಸಗೊಳಿಸಿರುವ ಕ್ರಮವು, ಸರ್ವಾಧಿಕಾರ ಧೋರಣೆಯ ಪ್ರದರ್ಶನವಾಗಿದೆ ಎಂದು ನ್ಯಾಯಪೀಠ ಹೇಳಿದೆ.


Share It

You cannot copy content of this page