ಸುದ್ದಿ

₹12 ಲಕ್ಷ ರು. ವಂಚನೆ ಆರೋಪ ಪ್ರಕರಣ; ಮೂವರು ಹೆಡ್ ಕಾನಸ್ಟೇಬಲ್ ಗಳು ಸಿಸಿಬಿ ಬಲೆಗೆ

Share It

ಬೆಂಗಳೂರು: ಔಷಧಿ ವ್ಯಾಪಾರಿಯೊಬ್ಬರಿಗೆ ₹12 ಲಕ್ಷ ವಂಚಿಸಿದ ಆರೋಪದ ಮೇಲೆ ಆರ್.ಟಿ ನಗರ ಪೊಲೀಸ್ ಠಾಣೆಯ ಇಬ್ಬರು ಮುಖ್ಯಪೇದೆಗಳು ಮತ್ತು ದಾವಣಗೆರೆ ನಗರದ ಓರ್ವ ಮುಖ್ಯಪೇದೆ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಂಚನೆಗೆ ಒಳಗಾದ ತಬ್ರೇಜ್ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಮೆಡಿಕಲ್ ಶಾಪ್ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಭೂಮಿ ಉಳುಮೆ ಮಾಡುವಾಗ 4 ಕೆ.ಜಿ. ಚಿನ್ನದ ನಾಣ್ಯ ಸಿಕ್ಕಿದೆ. ಅದನ್ನು ಕಡಿಮೆ ಬೆಲೆ ಕೊಡಿಸುವುದಾಗಿ ನಂಬಿಸಿ ತಬ್ರೇಜ್ ಅವರಿಗೆ 12 ಲಕ್ಷವನ್ನು ಅಪರಿಚಿತರು ವಂಚಿಸಿದ್ದರು. ಈ ಹಣದ ವಸೂಲಿ ಮಾಡಿಕೊಡುವುದಾಗಿ ನಂಬಿಸಿ ತಬ್ರೇಜ್ ಅವರಿಗೆ ಹೆಡ್ ಕಾನ್‌ಸ್ಟೇಬಲ್ ಗಳೂ ಮೋಸ ಮಾಡಿದ್ದರು. ಈ ಬಗ್ಗೆ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ತಿಂಗಳ ಹಿಂದೆ ದೂರುದಾರ ತಬ್ರೇಜ್ ಅವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ನಮ್ಮೂರಿನಲ್ಲಿ ಒಬ್ಬ ಮುದುಕುನಿದ್ದು, ಆತನಿಗೆ ಜಮೀನಿನಲ್ಲಿ ಉಳುಮೆ ವೇಳೆ 4 ಕೆ.ಜಿ. ಚಿನ್ನದ ನಾಣ್ಯಗಳು ಸಿಕ್ಕಿವೆ. ಕಡಿಮೆ ಬೆಲೆಗೆ ಅವರು ಮಾರಾಟ ಮಾಡುತ್ತಾರೆ. ಆಸಕ್ತಿ ಇದ್ದರೆ ದಾವಣಗೆರೆ ಬಸ್ ನಿಲ್ದಾಣಕ್ಕೆ ಬರುವಂತೆ ಸೂಚಿಸಿದ್ದ. ಅದರಂತೆ ಮಾ.13ರಂದು ಬಸ್‌ನಲ್ಲಿ ದಾವಣಗೆರೆಗೆ ಹೋದಾಗ ತಾತ ಮತ್ತು ಮೊಮ್ಮಗ ಭೇಟಿಯಾಗಿ ನಕಲಿ ಚಿನ್ನದ ನಾಣ್ಯ ತೋರಿಸಿ ‘ಇದರ ಮೌಲ್ಯ 80 ಲಕ್ಷ ರು. ಎಂದಿದ್ದರು. ಆಗ 20 ಲಕ್ಷ ರು. ಪಡೆದು 1 ಸಾವಿರ ನಾಣ್ಯಗಳನ್ನು ವ್ಯಾಪಾರಿಗೆ ವಂಚಕರು ಕೊಟ್ಟಿದ್ದರು. ಅವುಗಳನ್ನು ದೇವನಹಳ್ಳಿಯ ಪರಿಚಿತ ಅಕ್ಕಸಾಲಿಗನ ಬಳಿ ಪರೀಕ್ಷಿಸಿದಾಗ ಅಸಲಿ ಚಿನ್ನ ಎಂಬುದು ಗೊತ್ತಾಗಿದೆ. ದುರಾಸೆಗೆ ಬಿದ್ದ ತಬ್ರೇಜ್, ಮತ್ತೆ ದಾವಣಗೆರೆಗೆ ತೆರಳಿ 12 ಲಕ್ಷ ರು. ಕೊಟ್ಟು 2 ಕೆ.ಜಿ.ಖರೀದಿ ಮಾಡಿಕೊಂಡು ಮರಳಿದ್ದರು. ಎರಡನೇ ಬಾರಿ ತಮ್ಮ ಬಳಿಗೆ ಬಂದ ತಬ್ರೇಜ್‌ಗೆ ನಕಲಿ ಚಿನ್ನ ಕೊಟ್ಟು ಆರೋಪಿಗಳು ವಂಚಿಸಿದ್ದರು.

ಈ ವಂಚನೆಗೊಳಗಾಗಿರುವ ಸಂಬಂಧ ಸಹಾಯ ಮಾಡುವುದಾಗಿ ತಬ್ರೇಜ್ ನನ್ನು ಪೊಲೀಸರು ಆರ್.ಟಿ ನಗರ ಠಾಣೆಗೆ ಕರೆಸಿಕೊಂಡಿದ್ದರು. ವಂಚಿಸಿದ್ದ ಆರೋಪಿಗಳನ್ನು ಬಂಧಿಸಿ 12 ಲಕ್ಷರು, ಜಪ್ತಿ ಮಾಡಿದ್ದೇವೆ. ಇದರಲ್ಲಿ ತಮಗೆ 75 ಸಾವಿರ ರು. ಹಾಗೂ ಬಾತ್ಮೀದಾರನಿಗೆ 1 ಲಕ್ಷ ರು. ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದಕ್ಕೆ ತಬ್ರೇಜ್ ಒಪ್ಪಿದ್ದರು. ಮರುದಿನ ಆರ್.ಟಿ.ನಗರ ಠಾಣೆಗೆ ಹಣ ಪಡೆಯಲು ತಬ್ರೇಜ್ ತೆರಳಿದ್ದರು. ಆಗ ಅವರಿಂದ ಕಮಿಷನ್ ಹೆಸರಿನಲ್ಲಿ 75 ಸಾವಿರ ರು. ಪಡೆದ ಇಬ್ಬರು ಹೆಡ್‌ ಕಾನ್‌ಸ್ಟೇಬಲ್‌ಗಳು ಕಾರಿನಲ್ಲಿ 8 ಲಕ್ಷ ರು. ಇದೆ ಎಂದು ಹೇಳಿ ಪರಾರಿಯಾಗಿದ್ದರು. ಕೆಲ ಹೊತ್ತಿನ ಬಳಿಕ ಕಾರಿನ ಬಳಿ ಬಂದಾಗ ಹಣ ಇರಲಿಲ್ಲ. ಕೊನೆಗೆ ತಾವು ಮೋಸ ಹೋಗಿರುವುದು. ಅರಿವಾಗಿ ತಬ್ರೇಜ್ ದೂರು ಕೊಟ್ಟಿದ್ದರು. ಅದರನ್ವಯ ತನಿಖೆ ನಡೆಸಿದಾಗ ದೂರುದಾರ ತಬ್ರೇಜ್ ಗೆ ಪೊಲೀಸರು ಮತ್ತು ಅಪರಿಚಿತರು ಜೊತೆಯಾಗಿ ವಂಚಿಸಿದ್ದಾರೆ ಎಂಬುದು ತಿಳಿದು ಬಂದಿದೆ.


Share It

You cannot copy content of this page