ಕಲಬುರಗಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಉದ್ದೇಶಿಸಿ ‘ಇವರೇನ್ ಪಾಕಿಸ್ತಾನದಿಂದ ಬಂದಿದ್ದಾರೆಯೇ?’ ಎಂದು ಹೇಳಿಕೆ ನೀಡಿರುವ ವಿಚಾರವಾಗಿ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಅವರಿಗೆ 2ನೇ ನೋಟಿಸ್ ಜಾರಿಯಾಗಿದೆ.
ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಸುಬೇದಾರ್ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ. ಮೇ 24ರಂದು ನಡೆದ ಕಲಬುರಗಿ ಚಲೋ ಕಾರ್ಯಕ್ರಮದ ಭಾಷಣದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಉದ್ದೇಶಿಸಿ ನೀಡಿದ್ದ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.
ಈ ಹೇಳಿಕೆ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ಪೊಲೀಸ್ ಠಾಣೆಯಲ್ಲಿ ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಅವರಿಗೆ ನೋಟಿಸ್ ನೀಡಲಾಗಿದ್ದರೂ, ವಿಚಾರಣೆಗೆ ಹಾಜರಾಗಿರಲಿಲ್ಲ.