ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪೊಲೀಸರು ಜಿಲ್ಲೆಯಲ್ಲಿರುವ ಕೋಮುವಾದಿ ಸಂಘಟನೆಗಳ ಮುಖಂಡರ ಪಟ್ಟಿ ತಯಾರಿಸಿ, ಅವರ ಚಲನವಲನದ ಮೇಲೆ ನಿಗಾ ಇಡುವ ಕಾರ್ಯವನ್ನು ಆರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಕೆಲವು ಹತ್ಯೆಗಳಿಂದಾಗಿ ತಿಂಗಳಿನಿಂದ ಈಚೆಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. 10 ವರ್ಷಗಳ ಈಚೆಗೆ ನಡೆದಿರುವ ಹತ್ಯೆಗಳನ್ನು ವಿಶ್ಲೇಷಿಸಿದಾಗ, ಅವುಗಳ ಆರೋಪಿಗಳು ಕೋಮು ವಾದಿ ಸಂಘಟನೆಗಳ ಸಂಪರ್ಕದಲ್ಲಿ ಇದ್ದುದು ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಕೋಮುವಾದಿ ಸಂಘಟನೆಗಳ ಮುಖಂಡರ ಪಟ್ಟಿ ತಯಾರಿಸಿ, ಅವರ ದೈನಂದಿನ ಚಟುವಟಿಕೆ ಮೇಲೆ ನಿಗಾ ಇಡಲು ಕ್ರಮ ವಹಿಸಿದ್ದೇವೆ’ ಎಂದು ಅರುಣ್ ಕೆ. ತಿಳಿಸಿದ್ದಾರೆ
ಬಿಜೆಪಿ ಮುಖಂಡ ಅರುಣ್ ಪುತ್ತಿಲ, ಸೌಜನ್ಯಾ ಪರ ಹೋರಾಟ ನಡೆಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ, ವಿಶ್ವ ಹಿಂದೂ ಪರಿಷತ್ ಮುಖಂಡ ಭರತ್ ಕುಮ್ಮೇಲು, ಹಕೀಂ ಕೂರ್ನಡ್ಕ, ಕೆ.ಅಜೀಜ್, ಅಬ್ದುಲ್ ರಹಿಮಾನ್ ಸೇರಿ ದಂತೆ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.