ಸುದ್ದಿ

ಸಬ್ ಇನ್‌ಸ್ಪೆಕ್ಟರ್ ನೇಮಕಾತಿ, ಶೀಘ್ರ ಆದೇಶ ಪತ್ರ: ಡಾ.ಜಿ. ಪರಮೇಶ್ವರ್

Share It

ಕೊಪ್ಪಳ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರಿಂದ ಹಿಂದಿನ ಐದು ವರ್ಷಗಳಲ್ಲಿ ಪೊಲೀಸರ ನೇಮಕಾತಿ ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಇನ್ ಸ್ಪೆಕ್ಟರ್ ಹಾಗೂ ಕಾನ್ ಸ್ಟೇಬಲ್ ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬಡ ಜನ ಈಗ ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡಲಾಗುತ್ತಿದೆ ಎಂದರು.

ಬಿ.ಆರ್. ಪಾಟೀಲ ಅವರ ಆಡಿಯೊ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ ‘ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ ಹೇಳಿದ್ದೇನೆ. ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.


Share It

You cannot copy content of this page