ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಎಸ್ಐಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಆಗಸ್ಟ್ 28ಕ್ಕೆ ಹೈಕೋರ್ಟ್ ಮುಂದೂಡಿದೆ.
ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಸಮಾಜ ಪರಿವರ್ತನಾ ಸಮುದಾಯದಿಂದ ಮಧ್ಯ ಪ್ರವೇಶ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಭಾಗಶಃ ಅರ್ಜಿ ವಿಚಾರಣೆ ನಡೆಸಿ ಅದನ್ನ ಬಿಡುಗಡೆ ಮಾಡಿದರೆ ಅರ್ಜಿದಾರರ ಪರ ವಕೀಲರು ನನ್ನ ಬಗ್ಗೆ ಏನೆಂದುಕೊಳ್ಳುತ್ತಾರೆ ಎಂದು ಹೈಕೋರ್ಟ್ನ ನ್ಯಾ.ಇ.ಎಸ್ ಇಂದಿರೇಶ್ ಅವರು ಪ್ರಶ್ನೆ ಮಾಡಿದರು.
ಅರ್ಜಿ ವಿಚಾರಣೆ ನಡೆಸಲು ನಮ್ಮ ಆಕ್ಷೇಪ ಇಲ್ಲ ಅಂತಾ ಸಮಾಜ ಪರಿವರ್ತನಾ ಸಮುದಾಯದ ಪರ ವಕೀಲ ಬಸವರಾಜ್ ವಾದಿಸಿದರು. ನ್ಯಾಯಾಂಗ ವ್ಯವಸ್ಥೆಯನ್ನ ನಾವು ಗೌರವಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಇದು ಇನ್ನೊಂದು ಅರ್ಜಿ ಅಷ್ಟೇ ಎಂದು ಪೀಠ ಹೇಳಿತು. ಈ ವೇಳೆ, ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದ ಸರಕಾರದ ಪರ ವಕೀಲ ಎ.ಜಿ ಶಶಿಕಿರಣ್ ಶೆಟ್ಟಿ ಕೋರ್ಟ್ಗೆ ಮತ್ತೊಂದು ದಿನ ಪ್ರಕರಣದ ವಿಚಾರಣೆ ನಡೆಸಲು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ವಿಸ್ತರಿಸಿ ಆಗಸ್ಟ್ 28ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.