ಸುದ್ದಿ

ಲಂಚ ಪ್ರಕರಣ; ಪಿಡಿಒ ಅಮಾನತು

Share It

ದೊಡ್ಡಬಳ್ಳಾಪುರ: ಇ-ಸ್ವತ್ತು ನೀಡಲು 10 ಸಾವಿರ ರೂ.ಗಳ ಲಂಚ ಪಡೆದಿದ್ದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ಮರಿಕೇರಿ ಅವರನ್ನು ಅಮಾನತು ಮಾಡಲಾಗಿದೆ.

ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎನ್ ಅನುರಾಧ ಅವರು ಅವರು ಪಿಡಿಒ ಶಿವಾನಂದ ಮರಿಕೇರಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


Share It

You cannot copy content of this page